ಮಂಡ್ಯ: ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರ ಜತೆ ಕಿರಿಕ್ ಮಾಡಿಕೊಂಡು ಕರ್ತವ್ಯನಿರತ ಎಎಸ್ಐ ಮೇಲೆ ಹಲ್ಲೆಗೆ ವ್ಯಕ್ತಿ ಮುಂದಾದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ. ಪಾಂಡವಪುರ ಠಾಣೆ ASI ಮಹೇಶ್ ಪ್ರಭು ಮೇಲೆ ಶಾಂತಿನಗರ ನಿವಾಸಿ ನಾಗೇಶ್ ಹಲ್ಲೆಗೆ ಯತ್ನಿಸಿದ್ದಾರೆ. ಮಾಸ್ಕ್ ಧರಿಸದ್ದಕ್ಕೆ ದಂಡ ಪಾವತಿಸಲು ಹೇಳಿದ ಹಿನ್ನೆಲೆಯಲ್ಲಿ ಎಎಸ್ಐ ಕಾಲರ್ ಹಿಡಿದು ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ಪಾಂಡವಪುರ ಪಟ್ಟಣ ಠಾಣೆಯಲ್ಲಿ ನಾಗೇಶ್ ವಿರುದ್ಧ ಕೇಸ್ ದಾಖಲಾಗಿದೆ.










