ನ್ಯೂಸ್ ನಾಟೌಟ್ :ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಕಂಕನಾಡಿ ಬಳಿ ನಡೆದಿದೆ.ಉಳ್ಳಾಲದ ನಿವಾಸಿ ನವಾಜ್ (35) ಎಂದು ಹೇಳಲಾಗುತ್ತಿದೆ.
ಏನಿದು ಘಟನೆ?
ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದಾತ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದಳು. ಇದನ್ನು ಕೇಳಿ ಅಲ್ಲಿದ್ದವರು ಬಂದು ನವಾಜ್ ಗೆ ಥಳಿಸಿದ್ದಾರೆ.ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.ಆದರೆ ಈತನ ಹೆಸರು,ವಿಳಾಸವನ್ನು ಯಾರು ಕೇಳಿದರೂ ಬಾಯಿ ಬಿಡುತ್ತಿಲ್ಲವೆಂದು ಎನ್ನಲಾಗಿದೆ.ಸದ್ಯ ಈತನನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.



















He should be subjected to Chemical castration.